Monday, February 20, 2017

ಪ್ರಿತ್ಸೋರಿಗೊಂದು ಮಾತು: *ವೆಂಕಟೇಶ ಸಂಪ

ಪ್ರಿತ್ಸೋರಿಗೊಂದು ಮಾತು:
                *ವೆಂಕಟೇಶ ಸಂಪ,
ಅಬ್ಬಬ್ಬಾ ಅಂದ್ರೆ ಆರು ತಿಂಗಳು ಹಾಕಬಹುದಾದ ಒಂದು ಜೊತೆ ಬಟ್ಟೆ ತೆಗೆದುಕೊಳ್ಳೋ ನಾವು,ಬಣ್ಣ,ರೇಟು,ಕ್ವಾಲಿಟಿ,ಕಂಪನಿ,ಅಂತೆಲ್ಲಾ ನೋಡೋ ನಾವು ನಮ್ಮ ಇಡೀ ಜೀವನಕ್ಕೇ ಜೊತೆಯಾಗಿರಬೇಕಾದ ಸಂಗಾತಿ ಆರಿಸುವಾಗ ಕನಿಷ್ಟ ವಿವೇಚನೆ ಬಳಸದಿದ್ರೆ ಆಗ ಪ್ರೀತಿ ಕುರುಡು ಅನ್ನೋದು ಸ್ಪಷ್ಟವಾಗುತ್ತದೆ.
ಆರು ತಿಂಗಳಿಗೆ ಬಟ್ಟೆ ಬದಲಿಸಬಹುದು,ಆದರೆ ಇರುವ ಒಂದೇ ಒಂದು ಸುಂದರ ಬದುಕನ್ನು ಒಮ್ಮೆ ಹಾಳು ಮಾಡಿಕೊಂಡರೆ ಜೀವನಪೂರ್ತಿ ಸಾಯುತ್ತಲೇ ಇರಬೇಕಾದ ಸ್ಥಿತಿ ಬರುತ್ತದೆ.ಇವತ್ತಿನ ಕಠಿಣ ನಿರ್ಧಾರ ಇಡೀ ಜೀವನವನ್ನು ಸಂತಸವಾಗಿ ಇಡೋದಾದ್ರೆ ಒಳ್ಳೆ ನಿರ್ಧಾರಕ್ಕೆ ಹಿಂದೆ ಮುಂದೆ ನೋಡಬಾರದು,
ಏಕೆಂದರೆ ಪ್ರೀತಿಗಿಂತ ಬದುಕು ಮುಖ್ಯ ಕಾಣ್ರಿ.ಇಪ್ಪತ್ತು ವರ್ಷ ಪ್ರೀತಿಯಿಂದ ನಮ್ಮನ್ನು ಸಾಕಿದ ಅಪ್ಪ ಅಮ್ಮರ ವಾತ್ಸಲ್ಯಕ್ಕಿಂತ ಬೇಸ್ ಇಲ್ಲದ ಲವ್ ನ್ನು ನಂಬಿಕೊಂಡು,ಅದ್ಯಾರೋ ಕೈ ಕೊಟ್ರು ಅಂತ ದೇವದಾಸ್ ಆಗೋ ಅದೆಷ್ಟೋ ಜನ ಕ್ಷಣಿಕ ಪ್ರೀತಿಯ ಗುಲಾಮರಾಗಿ,ತಮ್ಮ ಬದುಕನ್ನು ಬಲಿಕೊಡುವುದರ ಜೊತೆಗೆ ಹೆತ್ತವರ ಕರುಳಿಗೆ ಆಸಿಡ್ ಹಾಕೋ ಈ ತರದ ಮಂದಿಗೆ ಹೇಳೋರು ಯಾರು!?ಪ್ರೀತಿಯ  ಆಕಾಂಕ್ಷಿಗಳಾಗುವ ಬರದಲ್ಲಿ ಇಡೀ ಬದುಕು ಬಲಿಯಾಗಬೇಕೇ!?
ನನ್ನ ಪ್ರಕಾರ ಸಮಸ್ಯೆಗಳಿಲ್ಲದ ಪ್ರೀತಿಗೆ ಪ್ರೋತ್ಸಾಹಿಸಬೇಕು.ಆದರೆ ಅದೇ ಪ್ರೀತಿ ಎಷ್ಟೋ ಬದುಕನ್ನು ಬಲಿ ತೆಗೆದುಕೊಳ್ಳುತ್ತದೆ ಅಂದರೆ ಅದನ್ನು ಕಿತ್ತೋಗೆಯಬೇಕು.ಲವ್ ಎಂಬ ಪ್ರೀತಿಗಿಂತ ಆಪ್ಯಾಯತೆ ನೀಡೋ ಜೀವನ ಪ್ರೀತಿ ದೊಡ್ಡದು.ಯಾರ ಬದುಕಿಗೂ ತೊಂದರೆ ಆಗದ ಪ್ರೀತಿ ಶಾಶ್ವತ ಸಂತೋಷ ನೀಡುತ್ತದೆ ಅಂತಾದರೆ ಅದನ್ನು ಒಪ್ಪಿಕೊಳ್ಳೋಣ.ಲವ್ ಫೇಲ್ ಆದ ತಕ್ಷಣ ಬದುಕೇ ಮುಗಿದುಹೋಯಿತು ಅಂದುಕೊಳ್ಳಬೇಡಿ.
ನೆನಪಿರಲಿ,ಯಾರೋ ಕೈ ಕೊಟ್ಟ ಮಾತ್ರಕ್ಕೆ ನಮ್ಮ ಜೀವನ ಮುಗಿಯೋದಿಲ್ಲ.ಅದು ಹೊಸ ಸುಂದರ ಬದುಕಿನ ಪ್ರಾರಂಭ ಎನ್ನೋದು ನೆನಪಿರಲಿ.
#ವೆಂಕಟೇಶಸಂಪ
#ಓದಿಸಂಪದಸಾಲುಪತ್ರಿಕೆ

No comments:

Daily News and News Analysis (ದಿನದ ಸುದ್ದಿ ಹಾಗು ಸುದ್ದಿ ವಿಶ್ಲೇಷಣೆ )

ರಾಷ್ಟ್ರ,ಅಂತರಾಷ್ಟ್ರ ಹಾಗು ರಾಜ್ಯದ ದಿನದ ಸುದ್ದಿ ಹಾಗು ಸುದ್ದಿ ವಿಶ್ಲೇಷಣೆ ನಮ್ಮ ಸಂಪದ saalu