Sunday, September 21, 2014

ನಾವು ಕೊಡೋ ನಾಲ್ಕು ರೂಪಾಯಿ ಇನ್ನೊಂದು ಬದುಕನ್ನು ನಿರ್ಮಿಸಬಲ್ಲದು. be subscriber of our magazine.... by venkatesha sampa



ನಾವು ಕೊಡೋ ನಾಲ್ಕು ರೂಪಾಯಿ ಇನ್ನೊಂದು ಬದುಕನ್ನು ನಿರ್ಮಿಸಬಲ್ಲದು. 

ಬೆಳಗಿನ ಜಾವ!? ಬೆಂಗಳೂರಿನಿಂದ ರಾಜಹಂಸ ಬಸ್ಸಲ್ಲಿ ಸಾಗರಕ್ಕೆ ಬರುತ್ತಿದ್ದೆ..ಮುಂಚಿನ ದಿನದ ಕೆಲಸದೊತ್ತಡಕ್ಕೆ ಅನಿಸುತ್ತದೆ.ಬಸ್ ಹತ್ತಿದಕೂಡಲೇ ನಿದ್ದೆ ಆಕ್ರಮಿಸಿಬಿಟ್ಟಿತ್ತು.

ನಾ ನಿದ್ರೆಗಣ್ಣಿನಲ್ಲಿದ್ದೆ.ಯಾರೋ ಒಬ್ಬ ಹುಡುಗ ಬಂದು ಬಸ್ಸಲ್ಲಿದ್ದವರಿಗೆ "ಅಣ್ಣಾ ಪೇಪರ್ ತಗೊಳ್ಳಿ.ನಾ ಸ್ಕೂಲ್ ಗೆ ಹೋಗೊ ಹುಡುಗ.ನನಗೆ ಸಹಾಯ ಅಗತ್ತೆ..ಅಂತಿದ್ದ....ಬಸ್ಸಲ್ಲಿ ಕೂತಿದ್ದ ದೊಡ್ಡ ಮನುಷ್ಯನೊಬ್ಬ "ಏಯ್ ಬೆಳಿಗ್ಗೆ ಮುಂಚೆ ಬಿಕ್ಷೆ ಕೇಳ್ಬೇಡ.ಹೋಗಪ್ಪ."ಅಂತ ಗದರಿಸುತ್ತಿದ್ದ...ಆ ಹುಡುಗ ವಿಚಲಿತನಾಗದೇ ಹೇಳಿದ."ಅಣ್ಣಾ ನಾನು ದುಡಿಯುತ್ತಿದ್ದಿನಿ.ನಿಮಗೆ ಸಾಧ್ಯ ಆದ್ರೆ ಪೇಪರ್ ತಗೊಂಡು ತಗೊಳ್ಳಿ"ಹೇಳಿ ಮತ್ತೆ ಪೇಪರ್...ಪೇಪರ್ ಅಂದ.

ನನಗೆ ಹಳೆಯ ನೆನಪುಗಳು ಉಕ್ಕಿ ಬಂದವು.ಮೈಸೂರಿನ ಗಲ್ಲಿ ಗಲ್ಲಿಗಳಲ್ಲಿ ಪೇಪರ್ ಹಂಚಿದ್ದು...ಬೆಳಿಗ್ಗೆ ಮುಂಚೆ ಪೇಪರ್ ಹಾಕುವಾಗ ನಾಯಿ ಅಟ್ಟಿಸಿಕೊಂಡು ಬಂದದ್ದು....ಎಲ್ಲವೂ ಒಂದು ಕ್ಷಣ ನೆನಪಾಯ್ತು....

ಆ ಬಸ್ಸಲ್ಲಿದ್ದ ಮಹಾನುಭಾವ,ಕಷ್ಟ ಪಟ್ಟು ದುಡಿಯುವವನಿಗೆ ಸಹಾಯ ಮಾಡೋದನ್ನ ಬಿಟ್ಟು ಬಿಕ್ಷೆ ಕೇಳ್ಬೇಡ ಅಂದಾಗಲೂ ಒಂದು ಕ್ಷಣ ನಮ್ಮ ಜನಗಳ ವರ್ತನೆ ಕಣ್ಣ ಮುಂದೆ ಬಂತು....
ನಮ್ಮ ಸಂಪದ ಸಾಲು ಪತ್ರಿಕೆಯ ಅಭಿಯಾನ ಕ್ಕೆ ಹೋದಾಗ...ಪಾಸಿಟೀವ್ ಜರ್ನಲಿಸಂ ಗೆ ಸಪೋರ್ಟ್ ಮಾಡಿ ಅಂದಾಗ,ಕ್ರೈಮ್ ನ್ನು ವೈಭವೀಕರಿಸೋದಿಲ್ಲ ಎಂದಾಗಲೂ ಪತ್ರಿಕೆಗೆ ಮೆಂಬರ್ ಆಗದೆ ಏನೋ ಒಂದು ಕೊಂಕು ಮಾತಾಡಿ ಅಕ್ಷರಶಃ ಬಿಕ್ಷುಕರಂತೆ ನನ್ನನ್ನು ನೋಡಿದ್ದು ನೆನಪಾಯ್ತು......

ನಿದ್ರೆ ಹಾರಿ ಹೋಯ್ತು..ಆ ಪೇಪರ್ ಮಾರುವ ಹುಡುಗನನ್ನು ಕರೆದೆ..ಎನು ಪುಟ್ಟ ನಿನ್ನ ಹೆಸ್ರು ಅಂದೆ...ಅಣ್ಣಾ ನನ್ ಹೆಸ್ರು ರಮೇಶ ಅಂದ.ನಾಲ್ಕನೆ ಕ್ಲಾಸ್ ಓದ್ತಿದಿನಿ.ಅಪ್ಪ ಕೂಲಿ ಕೆಲ್ಸಕ್ಕೆ ಹೋಗ್ತಾರೆ.ದಿನ ಬೆಳ್ಗೆ 3 ಗಂಟೆಯಿಂದ 7 ಗಂಟೆವರೆಗೆ ಪೇಪರ್ ಮಾರುತ್ತೀನಿ.ನೂರು ರೂಪಾಯಿ ಸಿಗತ್ತೆ.ಅಮೇಲೆ ಶಾಲೆಗೆ ಹೋಗ್ತಿನಿ.ಸಂಜೆ ಒಂದು ಅಂಗಡಿಗೆ ಹೋಗಿ ಸಾಮಾನು ಕಟ್ಟುತ್ತೀನಿ..ಐವತ್ತು ರೂಪಾಯಿ ಕೊಡ್ತಾರೆ ಅಂದ.....

ಆತನ ಬಗ್ಗೆ ಹೆಮ್ಮೆ ಅನ್ನಿಸ್ತು.ಎಲ್ಲಾ ಪೇಪರ್ ಒಂದೊಂದು ಕೊಡು ಅಂದೆ.50 ರೂಪಾಯಿ ಕೊಟ್ಟೆ.ಚಿಲ್ದ್ರೆ ನೀನೆ ಇಟ್ಕೊ ಅಂದೆ...ಆತ ಹೇಳಿದ್ದು "ಅಣ್ಣಾ ನಾ ದುಡಿದ ಹಣ ಮಾತ್ರ ಸಾಕು ನಂಗೆ"ಅಂತ....
ಇನ್ನೂ ಹೆಮ್ಮೆ ಅನ್ನಿಸ್ತು.ನನ್ನ ಫೋನ್ ನಂಬರ್ ಕೊಟ್ಟೆ.ಎನಾದ್ರು ಸಹಾಯ ಬೇಕಾದ್ರೆ ಯಾವಾಗ ಬೇಕಾದ್ರು ಕಾಲ್ ಮಾಡು ಹೇಳ್ದೆ....

ಆತ ಹೊರಟು ಹೋದ...ಬಸ್ ಹೊರಡಲು ಅನುವಾಯ್ತು.....ಬಿಕ್ಷೆ ಬೇಡು ಅಂದ ಮಹಾನುಭಾವನಿಗೆ ಪಶ್ಚಾತ್ತಾಪ ಮೂಡಿತ್ತು.ಆತ ಕಂಡಕ್ಟರ್ ಗೆ ಒಂದ್ನಿಷ ಅಂದವನೇ ಆ ಹುಡುಗನನ್ನು ಹುಡುಕಿ ಎಲ್ಲಾ ಪೇಪರನ್ನು ಒಂದೊಂದು ತಗೊಂಡು ಬಂದವನೇ ನನ್ನ ಪಕ್ಕ ಕುಳಿತ....

ನನ್ನ ನೋಡುತ್ತಾ....ಪ್ಲೀಸ್ ನನ್ನನ್ನ ಕ್ಷಮಿಸಿ.....ಒಬ್ಬ ದುಡಿಯುವ ಹುಡುಗನ್ನು ಅವಮಾನಿಸಿದೆ.....ಅದಕ್ಕೀಗ ಪಶ್ಚಾತ್ತಾಪ ಆಗ್ತಿದೆ...ಇನ್ಯಾವತ್ತು ಈ ತರ ದುಡಿಯೋ ಮಂದಿಗಳನ್ನು ಅಗೌರವಿಸೋದಿಲ್ಲ...ಅಂದ......ನೀವೇನು ಮಾಡ್ತಿರಾ ಕೇಳಿದ...ನಾನು ಸಂಪದ ಸಾಲು ಪತ್ರಿಕೆಯವನು ಅಂದೆ.....

ಸಾರ್ ನಿಮ್ಮ ಪತ್ರಿಕೆ ಯಾವಾಗಲು ಓದ್ತೀನಿ....ಪತ್ರಿಕೆ ಬ್ಲಾಕ್ ಎಂಡ್ ವೈಟ್ ಆದ್ರು ಚೆನ್ನಾಗಿದೆ...ಆದ್ರೆ ಕಲರ್ ಮಾಡಿ ಸಾರ್ ಅಂದ.

ನಾಲ್ಕು ವರ್ಷದಿಂದ ನಿಮ್ಮ ಪತ್ರಿಕೆ ನಮ್ಮನೆಗೆ ಬರ್ತಿದೆ.ಆದ್ರೆ ನಾನು ಒಂದೇ ವರ್ಷದ ದುಡ್ದು ಕೊಟ್ಟಿದ್ದು...ಬಸ್ಸಲ್ಲಿ ದುಡ್ಡು ಕೊಟ್ಟೆ ಅನ್ಕೋಬೇಡಿ...ತಗೊಳ್ಳಿ ಅಂತ ಹತ್ತು ವರ್ಷದ ಮೆಂಬರ್ ಶಿಪ್ ತಗೊಂಡ....
ಆತನೇ ಹೇಳಿದ....ದುಡಿಯುವವರನ್ನು ಗೌರವಿಸಿ ಚಿಕ್ಕದಾದ ಬೆಂಬಲ ನೀಡಿದ್ರೆ ಎಷ್ಟು ಖುಶಿ ಅಲ್ವಾ? ಅಂದ...

ನಾನು ಹೇಳಿದೆ."ಸಪೋರ್ಟ್ ಮಾಡದಿದ್ದರೂ ಬೇಸರವಿಲ್ಲ.ಅವಮಾನಿಸಬಾರದು...ಈ ಹುಡುಗನ ಕತೆ ನೋಡಿ..ನಾವು ಕೊಡೋ ನಾಲ್ಕು ರುಪಾಯಿಯಲ್ಲಿ ಆತ ಬಿಲ್ಡಿಂಗ್ ಕಟ್ಟಲ್ಲ...ಆದ್ರೆ ಬದುಕನ್ನು ಕಟ್ಟಿ ಕೊಳ್ತಾನೆ....ಅಂದೆ....

ಆತನ ಮುಖದಲ್ಲಿ ಪರಿವರ್ತನೆಯ ನಗು ಮೂಡಿತು.....

"ಬದಲಾವಣೆ ಬರಲಿ,ಪರಿವರ್ತನೆ ತರಲಿ.ಇದು ಸಂಪದ ಸಾಲು ಪತ್ರಿಕಾ ಅಭಿಯಾನ".
#ಓದಿ ಸಂಪದ ಸಾಲು

be subscriber of our magazine....
ನಿಮ್ಮದೇ ಪತ್ರಿಕೆಗೆ ಚಂದದಾರರಾಗಿ...
account name sampada saalu.vijaya
bank.sagara branch 577401 account
no 142901011003877 IFSC code
VIJB0001429 ಇದಕ್ಕೆ ಹಣ ಕಳುಹಿಸಿ...
ಚಂದದಾರರಾಗಬಹುದು.
subscription details
1000/- fr 10 years
2500/- fr 25 years
5000/- fr life membershp
10000/- fr life membershp with free
advertisement
our adress
sampada saalu patrike
post box 32.sagara 577401 u can send ur article to
sampavenki@gmail.com plz send it in nudi font

No comments:

Daily News and News Analysis (ದಿನದ ಸುದ್ದಿ ಹಾಗು ಸುದ್ದಿ ವಿಶ್ಲೇಷಣೆ )

ರಾಷ್ಟ್ರ,ಅಂತರಾಷ್ಟ್ರ ಹಾಗು ರಾಜ್ಯದ ದಿನದ ಸುದ್ದಿ ಹಾಗು ಸುದ್ದಿ ವಿಶ್ಲೇಷಣೆ ನಮ್ಮ ಸಂಪದ saalu